✍🌹 *ಇಂದು ರಾಷ್ಟ್ರೀಯ ವಿಜ್ಞಾನ ದಿನ*
🔬🔬🔬🔬🔬🔬🔬🔬🔬🔬
*ಜೈ ವಿಜ್ಞಾನ್, ಜೈ ವಿಜ್ಞಾನ್*
(Mallikarjun Hulasur,Mudhol)
🔬👉 *ರಾಷ್ಟ್ರೀಯ ವಿಜ್ಞಾನ ದಿನ ದೇಶಾದ್ಯಂತ ಫೆಬ್ರವರಿ 28ಅನ್ನು ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸಲಾಗುತ್ತದೆ. 1999ರಿಂದ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಷ್ಟ್ರೀಯ ವಿಜ್ಞಾನ ದಿನದಂದು ಚರ್ಚಿಸಲಾಗುವ ವಿಷಯವನ್ನು ಮೊದಲೇ ಘೋಷಿಸುತ್ತದೆ. ಏತಕ್ಕಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂಬ ಬಗ್ಗೆ ಕಿರು ಮಾಹಿತಿ ಇಲ್ಲಿದೆ.*
🌹 *ಏನಿದು ರಾಷ್ಟ್ರೀಯ ವಿಜ್ಞಾನ ದಿನ*
*ವಿಜ್ಞಾನ ಜಗತ್ತಿನಲ್ಲಿ ಭಾರತವನ್ನು ಮೇರು ಶಿಖರಕ್ಕೆ ಕೊಂಡೊಯ್ದ ಸರ್ ಸಿ.ವಿ.ರಾಮನ್ ಅವರ ಅಪೂರ್ವ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ರಾಮನ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಸಭಾಂಗಣದಲ್ಲಿ ಕ್ರಿ.ಶ.1928ರ ಫೆಬ್ರವರಿ 28ರಂದು ಬೆಳಕಿನ ಚದುರಿವಿಕೆಯಲ್ಲಿ ಸಾಮಗ್ರಿಗಳ ಗುಣಲಕ್ಷ ಣಗಳ ಪರಿಣಾಮದ ಬಗ್ಗೆ ಹೊಸ ಹೊಳಹೊಂದನ್ನು ಪ್ರತಿಪಾದಿಸಿದ ದಿನ. ಮುಂದಿನ ದಿನಗಳಲ್ಲಿ ಅದು ರಾಮನ್ ಪರಿಣಾಮವೆಂದೇ ಪ್ರಸಿದ್ಧವಾಯಿತು. ಈ ಹಿನ್ನೆಲೆಯಲ್ಲಿ 1987 ಫೆಬ್ರವರಿ 28ರಂದು ದೇಶಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ.*
🌹👉 *ಆಚರಣೆಯ ಉದ್ದೇಶ*
*ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ, ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ ಹೀಗೆ ನಾನಾ ಚಟುವಟಿಕೆಗಳನ್ನು ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ.*
🌹🔬👉 *ರಾಮನ್ ಕುರಿತಂತೆ*
(Mallikarjun Hulasur)
*ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊತ್ತಮೊದಲ ವಿಜ್ಞಾನ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ.ವಿ. ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ . ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ 1888ರ ನವೆಂಬರ್ 7ರಂದು . ಅವರ ತಂದೆ ಚಂದ್ರಶೇಖರ್ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ರಾಮನ್ ಅವರು ಕಲ್ಕತಾ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಮುಂದೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.*
🌹 *ರಾಮನ್ ಪರಿಣಾಮ*
*ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆಮಾಡಲು ಹೊರಟ ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯ ಕಂಡುಹಿಡಿದರು. ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು. ಕೋಲ್ಕತಾದ ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್ನಲ್ಲಿ ರಾಮನ್ ಅವರು ತಮ್ಮ ಸಹೋದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ 1930ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲ ನೊಬೆಲ್ ಪುರಸ್ಕಾರವೂ ಹೌದು.*
🌹🔬✍ *ಫೆಬ್ರುವರಿ 28 ರಂದು ದೇಶದಾದ್ಯಂತ ವಿಜ್ಞಾನದ ದಿನವನ್ನಾಗಿ ಆಚರಿಸುತ್ತೇವೆ. ಅಂದು ಡಾ: ಸರ್. ಸಿ.ವಿ. ರಾಮನ್ ರವರು ‘ರಾಮನ್ ಪರಿಣಾಮ’ ಎಂಬ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ನಿರೂಪಿಸಿ ತೋರಿಸಿದ ದಿನ.*
👉 *ರಾಮನ್ ಪರಿಣಾಮದ ಮಹತ್ವ :*
*ಇಂದು `ರಾಮನ್ ಪರಿಣಾಮ’ ದ್ರವ್ಯದ ಅಣುರಚನೆಯನ್ನು ನಿರ್ಧರಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಮೈಕ್ರೋವೇವ್, ಲೇಸರ್, ಇನ್ಫ್ರಾರೆಡ್, ಅಲ್ಟ್ರಾ ವಯೋಲೆಟ್, ಮತ್ತು ಕ್ಷ-ಕಿರಣ ರಾಮನ್ ಸ್ಪೆಕ್ಟ್ರೋಸ್ಕೋಪಿ ಇಂದು ಮುಂಚೂಣಿಯಲ್ಲಿರುವ ಸಂಶೋಧನಾ ಕ್ಷೇತ್ರಗಳು. ಭೌತ, ಜೀವ, ರಸಾಯನ ಮತ್ತು ಖಗೋಳ ವಿಜ್ಞಾನ ಹಾಗೂ ನ್ಯಾನೋ ತಂತ್ರಜ್ಞಾನದ ಹಲವು ವಿಭಾಗಗಳಲ್ಲಿ ಇದರ ಪರಿಣಾಮವಿದೆ.*
*ರಾಮನ್ ಪರಿಣಾಮ ಕುರಿತು ಆಲ್ಬರ್ಟ್ ಐನ್ಸ್ಟೀನ್ ಸರಳವಾಗಿ ಈ ರೀತಿ ಹೇಳಿದ್ದಾರೆ: “ವಸ್ತುವಿನಲ್ಲಿ ಬೆಳಕಿನ ಚದುರುವಿಕೆಯಿಂದ ಬೆಳಕಿನ ಶಕ್ತಿಯಲ್ಲಾಗುವ ಬದಲಾವಣೆಯನ್ನು ಗುರುತಿಸಿದವರಲ್ಲಿ ರಾಮನ್ ಮೊದಲಿಗರು. ನನಗಿನ್ನೂ ಸ್ಪಷ್ಟವಾಗಿ ನೆನಪಿದೆ – ಬರ್ಲಿನ್ನಿನ ಭೌತಶಾಸ್ತ್ರ ಗೋಷ್ಟಿಯಲ್ಲಿ ಭಾಗವಹಿಸಿದ ನಮ್ಮೆಲ್ಲರ ಮೇಲೆ ಈ ಆವಿಷ್ಕಾರ ಗಾಢ ಪರಿಣಾಮ ಬೀರಿತ್ತು”.*
*ಇಂದಿನ ದುರಂತವೆಂದರೆ, ‘ರಾಮನ್ ಪರಿಣಾಮ’ ವನ್ನು ಈ ದೇಶದಲ್ಲಿಯೇ ಆವಿಷ್ಕರಿಸಿದ್ದರೂ ಕೂಡ, ಈ ಪರಿಣಾಮದ ಆಧಾರದಲ್ಲಿ ಕಾರ್ಯನಿರ್ವಹಿಸುವ ಲೇಸರ್ ಉಪಕರಣಗಳನ್ನು ತಯಾರಿಸಲಾಗದೇ ಇಂದಿಗೂ ಆಮದು ಮಾಡಿಕೊಳ್ಳುತ್ತಿದ್ದೇವೆ.*
(Mallikarjun Hulasur)
✍ 🌹 *ಸ್ವಾವಲಂಬಿ ಸಂಶೋಧನಾಲಯಗಳ ಸ್ಥಾಪನೆ :*
*ಬಂಗಾಳದಲ್ಲಿ ರಾಜ್ಯ ವಿಭಜನೆ ವಿರುದ್ದ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟಗಳು ತೀವ್ರಗೊಂಡಿದ್ದ ಕಾಲವದು. ಇದರಿಂದಾಗಿ ಪ್ರತಿಷ್ಟಿತ ವಿಜ್ಞಾನ ಸಂಸ್ಥೆಗಳಲ್ಲಿ ಭಾರತೀಯರೇ ಹುದ್ದೆ ಅಲಂಕರಿಸಬೇಕೆಂದು ಕೋಲ್ಕತ್ತಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತೀರ್ಮಾನಿಸಿತ್ತು. ಇದರಿಂದಾಗಿ ಪ್ರತಿಭಾನ್ವಿತ ರಾಮನ್ರವರು ತಾವು ಕೆಲಸ ಮಾಡುತ್ತಿದ್ದ ಐಸಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಪ್ರೊಫೆಸರ್ ಹುದ್ದೆಗೆ ವಿಶ್ವವಿದ್ಯಾಲಯ ಸೇರಿದರು.*
*1921 ರಲ್ಲಿ ಇಂಗ್ಲೆಂಡಿನಲ್ಲಿ ವೈಜ್ಞಾನಿಕ ಸಮ್ಮೇಳನದಲ್ಲಿ ಭಾಗವಹಿಸಿ ಹಡಗಿನಲ್ಲಿ ಭಾರತಕ್ಕೆ ರಾಮನ್ ಪ್ರಯಾಣಿಸುತ್ತಿದ್ದರು. ಆಗವರು ಕೋಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರದ ಅಧ್ಯಾಪಕರಾಗಿದ್ದರು. ಅಷ್ಟರಲ್ಲಾಗಲೇ ಅವರು ದೃಗ್ವಿಜ್ಞಾನ ಮತ್ತು ಧ್ವನಿ ವಿಜ್ಞಾನಗಳ ಅಧ್ಯಯನದಲ್ಲಿ ನಡೆಸಿರುವ ಸಂಶೋಧನೆ ಕುರಿತು ಇಂಗ್ಲೆಂಡ್ನ ಜೆ.ಜೆ. ಥಾಮ್ಸನ್ ಮತ್ತು ಲಾರ್ಡ್ ರುದರ್ಫರ್ಡ್ ರಂಥಹ ವಿಜ್ಞಾನಿಗಳ ಗಮನ ಸೆಳೆದಿದ್ದರು.*
*ಹಡಗಿನ ಪಯಣದಲ್ಲಿ ಸಾಗರದ ಶುಭ್ರ ನೀಲಿ ಬಣ್ಣವನ್ನು ಕಂಡು ವಿಸ್ಮಯಗೊಂಡರು. ಆಗಸದ ನೀಲಿ ಬಣ್ಣಕ್ಕೆ ಕಾರಣವೇನೆಂದು ಲಾರ್ಡ್ ರಾಲೆ ಎಂಬ ವಿಜ್ಞಾನಿ ಅದಾಗಲೇ ವಿವರಣೆ ನೀಡಿ ನೊಬೆಲ್ ಪ್ರಶಸ್ತಿ ಪಡೆದುಕೊಂಡಿದ್ದ. ವಾಯುಮಂಡಲದಲ್ಲಿರುವ ಧೂಳಿನ ಕಣಗಳು ಮತ್ತು ವಿವಿಧ ಅನಿಲಗಳು ಬೆಳಕನ್ನು ಚದುರಿಸುವುದರಿಂದ ಬೆಳಕಿನಲ್ಲಿರುವ ನೀಲಿ ಬಣ್ಣ ಹೆಚ್ಚು ಚದುರುತ್ತದೆ, ಹಾಗಾಗಿ ಬಾನಿನ ಬಣ್ಣ ನೀಲಿ ಎಂದು ವಿವರಿಸಿದ್ದ. ಆದರೆ ಸಮುದ್ರದ ಬಣ್ಣಕ್ಕೆ ಕಾರಣ ಕೊಡಲು ಸಾಧ್ಯವಾಗಿರಲಿಲ್ಲ.*
*ರಾಮನ್ ಕಣ್ಣ ಮುಂದೆ ನೀಲಿ ಬಣ್ಣ ಹೊದ್ದ ನೀರು ಕಂಗೊಳಿಸುತ್ತಿತ್ತು. ಮೈ ಮನವೆಲ್ಲ ಬೆಳಕಿನ ಚದುರುವಿಕೆಯ ವಿಷಯದಲ್ಲಿ ಲೀನವಾಗಿತ್ತು. ನೀರಿನ ಅಣುಗಳು ಬೆಳಕಿನಲ್ಲಿರುವ ನೀಲಿ ಬಣ್ಣವನ್ನು ಹೆಚ್ಚಿನ ಪ್ರಮಾಣದಲ್ಲಿ ಚದುರಿಸುವುದೇ ಈ ನೀಲಿಗೆ ಕಾರಣವೆಂದು ಆಲೋಚಿಸತೊಡಗಿದರು. ಸಮುದ್ರದ ನೀರನ್ನು ಅಲ್ಲಿಯೇ ಪಾತ್ರೆಗಳಲ್ಲಿ ಸಂಗ್ರಹಿಸಿ ರೋಹಿತ ದರ್ಶಕ ಬಳಸಿ ಹಡಗಿನಲ್ಲಿಯೇ ಪ್ರಯೋಗ ಮಾಡತೊಡಗಿದರು. ಹಡಗು ಮುಂಬೈ ಬಂದರು ತಲುಪುವ ಹೊತ್ತಿಗೆ ಅವರ ಪ್ರಯೋಗ ಫಲಿತಾಂಶಗಳು ಸಂಶೋಧನ ಲೇಖನವಾಗಿದ್ದವು. ಶೀಘ್ರದಲ್ಲೇ ಪ್ರಸಿದ್ದ “ನೇಚರ್” ಪತ್ರಿಕೆಯಲ್ಲಿ ಪ್ರಕಟವಾದವು.*
🙏 *ಜೈ ವಿಜ್ಞಾನ್*🙏
(Mallikarjun Hulasur)
🔬🔬🔬🔬🔬🔬🔬🔬🔬🔬
*ಜೈ ವಿಜ್ಞಾನ್, ಜೈ ವಿಜ್ಞಾನ್*
(Mallikarjun Hulasur,Mudhol)
🔬👉 *ರಾಷ್ಟ್ರೀಯ ವಿಜ್ಞಾನ ದಿನ ದೇಶಾದ್ಯಂತ ಫೆಬ್ರವರಿ 28ಅನ್ನು ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸಲಾಗುತ್ತದೆ. 1999ರಿಂದ ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ರಾಷ್ಟ್ರೀಯ ವಿಜ್ಞಾನ ದಿನದಂದು ಚರ್ಚಿಸಲಾಗುವ ವಿಷಯವನ್ನು ಮೊದಲೇ ಘೋಷಿಸುತ್ತದೆ. ಏತಕ್ಕಾಗಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ ಎಂಬ ಬಗ್ಗೆ ಕಿರು ಮಾಹಿತಿ ಇಲ್ಲಿದೆ.*
🌹 *ಏನಿದು ರಾಷ್ಟ್ರೀಯ ವಿಜ್ಞಾನ ದಿನ*
*ವಿಜ್ಞಾನ ಜಗತ್ತಿನಲ್ಲಿ ಭಾರತವನ್ನು ಮೇರು ಶಿಖರಕ್ಕೆ ಕೊಂಡೊಯ್ದ ಸರ್ ಸಿ.ವಿ.ರಾಮನ್ ಅವರ ಅಪೂರ್ವ ಸಾಧನೆಗಳ ನೆನಪಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತದೆ. ರಾಮನ್ ಅವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಸಭಾಂಗಣದಲ್ಲಿ ಕ್ರಿ.ಶ.1928ರ ಫೆಬ್ರವರಿ 28ರಂದು ಬೆಳಕಿನ ಚದುರಿವಿಕೆಯಲ್ಲಿ ಸಾಮಗ್ರಿಗಳ ಗುಣಲಕ್ಷ ಣಗಳ ಪರಿಣಾಮದ ಬಗ್ಗೆ ಹೊಸ ಹೊಳಹೊಂದನ್ನು ಪ್ರತಿಪಾದಿಸಿದ ದಿನ. ಮುಂದಿನ ದಿನಗಳಲ್ಲಿ ಅದು ರಾಮನ್ ಪರಿಣಾಮವೆಂದೇ ಪ್ರಸಿದ್ಧವಾಯಿತು. ಈ ಹಿನ್ನೆಲೆಯಲ್ಲಿ 1987 ಫೆಬ್ರವರಿ 28ರಂದು ದೇಶಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಗುತ್ತಿದೆ.*
🌹👉 *ಆಚರಣೆಯ ಉದ್ದೇಶ*
*ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ, ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ ಹೀಗೆ ನಾನಾ ಚಟುವಟಿಕೆಗಳನ್ನು ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ. ಪ್ರತೀ ವರ್ಷ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಚಟುವಟಿಕೆಗಳನ್ನು ಒಂದು ನಿರ್ದಿಷ್ಟ ವಿಷಯದ ಸುತ್ತ ಆಯೋಜಿಸಲಾಗುತ್ತದೆ.*
🌹🔬👉 *ರಾಮನ್ ಕುರಿತಂತೆ*
(Mallikarjun Hulasur)
*ವಿಜ್ಞಾನದಲ್ಲಿ ನೊಬೆಲ್ ಪ್ರಶಸ್ತಿ ಪಡೆದ ಏಷ್ಯಾದ ಮೊತ್ತಮೊದಲ ವಿಜ್ಞಾನ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿ.ವಿ. ರಾಮನ್ ಅವರ ಪೂರ್ಣ ಹೆಸರು ಚಂದ್ರಶೇಖರ ವೆಂಕಟರಾಮನ್ . ಜನಿಸಿದ್ದು ತಮಿಳುನಾಡಿನ ತಿರುಚಿನಾಪಳ್ಳಿಯಲ್ಲಿ 1888ರ ನವೆಂಬರ್ 7ರಂದು . ಅವರ ತಂದೆ ಚಂದ್ರಶೇಖರ್ ಅಯ್ಯರ್ ಗಣಿತ ಹಾಗೂ ಭೌತವಿಜ್ಞಾನದ ಶಿಕ್ಷಕರಾಗಿದ್ದರು. ರಾಮನ್ ಅವರು ಕಲ್ಕತಾ ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರಾಗಿ, ಮುಂದೆ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.*
🌹 *ರಾಮನ್ ಪರಿಣಾಮ*
*ಒಮ್ಮೆ ಹಡಗಿನಲ್ಲಿ ಪ್ರಯಾಣಿಸುವಾಗ ರಾಮನ್ ಅವರಿಗೆ ಸಮುದ್ರ ಏಕೆ ಯಾವಾಗಲೂ ನೀಲಿಯಾಗಿಯೇ ಕಾಣುತ್ತದೆ ಎಂಬ ಪ್ರಶ್ನೆ ಎದುರಾಯಿತಂತೆ. ಅದು ಆಕಾಶದ ಬಣ್ಣದ ಪ್ರತಿಫಲನವೋ ಅಥವಾ ಈ ನೀಲಿ ಬಣ್ಣದ ಹಿಂದೆ ಬೇರೇನಾದರೂ ಗುಟ್ಟು ಅಡಗಿದೆಯೋ ಎಂದು ಪತ್ತೆಮಾಡಲು ಹೊರಟ ರಾಮನ್ ಸೂರ್ಯನ ಬೆಳಕು ನೀರಿನಲ್ಲಿ ಚದುರಿಹೋಗುವುದೇ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ವಿಷಯ ಕಂಡುಹಿಡಿದರು. ಇದೇ ಅಂಶ ಮುಂದೆ ಅವರು ತಮ್ಮ ಅಧ್ಯಯನವನ್ನು ಮುಂದುವರೆಸಲು ಪ್ರೇರಣೆಯಾಯಿತು. ಕೋಲ್ಕತಾದ ಇಂಡಿಯನ್ ಅಸೋಸಿಯೇಷನ್ ಫಾರ್ ಕಲ್ಟಿವೇಷನ್ ಆಫ್ ಸೈನ್ಸ್ನಲ್ಲಿ ರಾಮನ್ ಅವರು ತಮ್ಮ ಸಹೋದ್ಯೋಗಿಗಳೊಡನೆ ನಡೆಸಿದ ಅಧ್ಯಯನಗಳ ಪರಿಣಾಮವೇ ರಾಮನ್ ಪರಿಣಾಮದ ಶೋಧ. ಇದೇ ಸಾಧನೆಗಾಗಿ ಅವರಿಗೆ 1930ನೇ ಇಸವಿಯಲ್ಲಿ ನೊಬೆಲ್ ಪುರಸ್ಕಾರ ನೀಡಿ ಗೌರವಿಸಲಾಯಿತು. ಇದು ವಿಜ್ಞಾನ ಕ್ಷೇತ್ರದಲ್ಲಿ ಭಾರತಕ್ಕೆ ದೊರೆತ ಮೊತ್ತಮೊದಲ ನೊಬೆಲ್ ಪುರಸ್ಕಾರವೂ ಹೌದು.*
🌹🔬✍ *ಫೆಬ್ರುವರಿ 28 ರಂದು ದೇಶದಾದ್ಯಂತ ವಿಜ್ಞಾನದ ದಿನವನ್ನಾಗಿ ಆಚರಿಸುತ್ತೇವೆ. ಅಂದು ಡಾ: ಸರ್. ಸಿ.ವಿ. ರಾಮನ್ ರವರು ‘ರಾಮನ್ ಪರಿಣಾಮ’ ಎಂಬ ಪ್ರಕ್ರಿಯೆಯನ್ನು ಪ್ರಾಯೋಗಿಕವಾಗಿ ನಿರೂಪಿಸಿ ತೋರಿಸಿದ ದಿನ.*
👉 *ರಾಮನ್ ಪರಿಣಾಮದ ಮಹತ್ವ :*
*ಇಂದು `ರಾಮನ್ ಪರಿಣಾಮ’ ದ್ರವ್ಯದ ಅಣುರಚನೆಯನ್ನು ನಿರ್ಧರಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಮೈಕ್ರೋವೇವ್, ಲೇಸರ್, ಇನ್ಫ್ರಾರೆಡ್, ಅಲ್ಟ್ರಾ ವಯೋಲೆಟ್, ಮತ್ತು ಕ್ಷ-ಕಿರಣ ರಾಮನ್ ಸ್ಪೆಕ್ಟ್ರೋಸ್ಕೋಪಿ ಇಂದು ಮುಂಚೂಣಿಯಲ್ಲಿರುವ ಸಂಶೋಧನಾ ಕ್ಷೇತ್ರಗಳು. ಭೌತ, ಜೀವ, ರಸಾಯನ ಮತ್ತು ಖಗೋಳ ವಿಜ್ಞಾನ ಹಾಗೂ ನ್ಯಾನೋ ತಂತ್ರಜ್ಞಾನದ ಹಲವು ವಿಭಾಗಗಳಲ್ಲಿ ಇದರ ಪರಿಣಾಮವಿದೆ.*
*ರಾಮನ್ ಪರಿಣಾಮ ಕುರಿತು ಆಲ್ಬರ್ಟ್ ಐನ್ಸ್ಟೀನ್ ಸರಳವಾಗಿ ಈ ರೀತಿ ಹೇಳಿದ್ದಾರೆ: “ವಸ್ತುವಿನಲ್ಲಿ ಬೆಳಕಿನ ಚದುರುವಿಕೆಯಿಂದ ಬೆಳಕಿನ ಶಕ್ತಿಯಲ್ಲಾಗುವ ಬದಲಾವಣೆಯನ್ನು ಗುರುತಿಸಿದವರಲ್ಲಿ ರಾಮನ್ ಮೊದಲಿಗರು. ನನಗಿನ್ನೂ ಸ್ಪಷ್ಟವಾಗಿ ನೆನಪಿದೆ – ಬರ್ಲಿನ್ನಿನ ಭೌತಶಾಸ್ತ್ರ ಗೋಷ್ಟಿಯಲ್ಲಿ ಭಾಗವಹಿಸಿದ ನಮ್ಮೆಲ್ಲರ ಮೇಲೆ ಈ ಆವಿಷ್ಕಾರ ಗಾಢ ಪರಿಣಾಮ ಬೀರಿತ್ತು”.*
*ಇಂದಿನ ದುರಂತವೆಂದರೆ, ‘ರಾಮನ್ ಪರಿಣಾಮ’ ವನ್ನು ಈ ದೇಶದಲ್ಲಿಯೇ ಆವಿಷ್ಕರಿಸಿದ್ದರೂ ಕೂಡ, ಈ ಪರಿಣಾಮದ ಆಧಾರದಲ್ಲಿ ಕಾರ್ಯನಿರ್ವಹಿಸುವ ಲೇಸರ್ ಉಪಕರಣಗಳನ್ನು ತಯಾರಿಸಲಾಗದೇ ಇಂದಿಗೂ ಆಮದು ಮಾಡಿಕೊಳ್ಳುತ್ತಿದ್ದೇವೆ.*
(Mallikarjun Hulasur)
✍ 🌹 *ಸ್ವಾವಲಂಬಿ ಸಂಶೋಧನಾಲಯಗಳ ಸ್ಥಾಪನೆ :*
*ಬಂಗಾಳದಲ್ಲಿ ರಾಜ್ಯ ವಿಭಜನೆ ವಿರುದ್ದ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟಗಳು ತೀವ್ರಗೊಂಡಿದ್ದ ಕಾಲವದು. ಇದರಿಂದಾಗಿ ಪ್ರತಿಷ್ಟಿತ ವಿಜ್ಞಾನ ಸಂಸ್ಥೆಗಳಲ್ಲಿ ಭಾರತೀಯರೇ ಹುದ್ದೆ ಅಲಂಕರಿಸಬೇಕೆಂದು ಕೋಲ್ಕತ್ತಾ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತೀರ್ಮಾನಿಸಿತ್ತು. ಇದರಿಂದಾಗಿ ಪ್ರತಿಭಾನ್ವಿತ ರಾಮನ್ರವರು ತಾವು ಕೆಲಸ ಮಾಡುತ್ತಿದ್ದ ಐಸಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಪ್ರೊಫೆಸರ್ ಹುದ್ದೆಗೆ ವಿಶ್ವವಿದ್ಯಾಲಯ ಸೇರಿದರು.*
*1921 ರಲ್ಲಿ ಇಂಗ್ಲೆಂಡಿನಲ್ಲಿ ವೈಜ್ಞಾನಿಕ ಸಮ್ಮೇಳನದಲ್ಲಿ ಭಾಗವಹಿಸಿ ಹಡಗಿನಲ್ಲಿ ಭಾರತಕ್ಕೆ ರಾಮನ್ ಪ್ರಯಾಣಿಸುತ್ತಿದ್ದರು. ಆಗವರು ಕೋಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರದ ಅಧ್ಯಾಪಕರಾಗಿದ್ದರು. ಅಷ್ಟರಲ್ಲಾಗಲೇ ಅವರು ದೃಗ್ವಿಜ್ಞಾನ ಮತ್ತು ಧ್ವನಿ ವಿಜ್ಞಾನಗಳ ಅಧ್ಯಯನದಲ್ಲಿ ನಡೆಸಿರುವ ಸಂಶೋಧನೆ ಕುರಿತು ಇಂಗ್ಲೆಂಡ್ನ ಜೆ.ಜೆ. ಥಾಮ್ಸನ್ ಮತ್ತು ಲಾರ್ಡ್ ರುದರ್ಫರ್ಡ್ ರಂಥಹ ವಿಜ್ಞಾನಿಗಳ ಗಮನ ಸೆಳೆದಿದ್ದರು.*
*ಹಡಗಿನ ಪಯಣದಲ್ಲಿ ಸಾಗರದ ಶುಭ್ರ ನೀಲಿ ಬಣ್ಣವನ್ನು ಕಂಡು ವಿಸ್ಮಯಗೊಂಡರು. ಆಗಸದ ನೀಲಿ ಬಣ್ಣಕ್ಕೆ ಕಾರಣವೇನೆಂದು ಲಾರ್ಡ್ ರಾಲೆ ಎಂಬ ವಿಜ್ಞಾನಿ ಅದಾಗಲೇ ವಿವರಣೆ ನೀಡಿ ನೊಬೆಲ್ ಪ್ರಶಸ್ತಿ ಪಡೆದುಕೊಂಡಿದ್ದ. ವಾಯುಮಂಡಲದಲ್ಲಿರುವ ಧೂಳಿನ ಕಣಗಳು ಮತ್ತು ವಿವಿಧ ಅನಿಲಗಳು ಬೆಳಕನ್ನು ಚದುರಿಸುವುದರಿಂದ ಬೆಳಕಿನಲ್ಲಿರುವ ನೀಲಿ ಬಣ್ಣ ಹೆಚ್ಚು ಚದುರುತ್ತದೆ, ಹಾಗಾಗಿ ಬಾನಿನ ಬಣ್ಣ ನೀಲಿ ಎಂದು ವಿವರಿಸಿದ್ದ. ಆದರೆ ಸಮುದ್ರದ ಬಣ್ಣಕ್ಕೆ ಕಾರಣ ಕೊಡಲು ಸಾಧ್ಯವಾಗಿರಲಿಲ್ಲ.*
*ರಾಮನ್ ಕಣ್ಣ ಮುಂದೆ ನೀಲಿ ಬಣ್ಣ ಹೊದ್ದ ನೀರು ಕಂಗೊಳಿಸುತ್ತಿತ್ತು. ಮೈ ಮನವೆಲ್ಲ ಬೆಳಕಿನ ಚದುರುವಿಕೆಯ ವಿಷಯದಲ್ಲಿ ಲೀನವಾಗಿತ್ತು. ನೀರಿನ ಅಣುಗಳು ಬೆಳಕಿನಲ್ಲಿರುವ ನೀಲಿ ಬಣ್ಣವನ್ನು ಹೆಚ್ಚಿನ ಪ್ರಮಾಣದಲ್ಲಿ ಚದುರಿಸುವುದೇ ಈ ನೀಲಿಗೆ ಕಾರಣವೆಂದು ಆಲೋಚಿಸತೊಡಗಿದರು. ಸಮುದ್ರದ ನೀರನ್ನು ಅಲ್ಲಿಯೇ ಪಾತ್ರೆಗಳಲ್ಲಿ ಸಂಗ್ರಹಿಸಿ ರೋಹಿತ ದರ್ಶಕ ಬಳಸಿ ಹಡಗಿನಲ್ಲಿಯೇ ಪ್ರಯೋಗ ಮಾಡತೊಡಗಿದರು. ಹಡಗು ಮುಂಬೈ ಬಂದರು ತಲುಪುವ ಹೊತ್ತಿಗೆ ಅವರ ಪ್ರಯೋಗ ಫಲಿತಾಂಶಗಳು ಸಂಶೋಧನ ಲೇಖನವಾಗಿದ್ದವು. ಶೀಘ್ರದಲ್ಲೇ ಪ್ರಸಿದ್ದ “ನೇಚರ್” ಪತ್ರಿಕೆಯಲ್ಲಿ ಪ್ರಕಟವಾದವು.*
🙏 *ಜೈ ವಿಜ್ಞಾನ್*🙏
(Mallikarjun Hulasur)
Comments
Post a Comment